ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ( ರಿ), ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ( ರಿ), ಕೆಎಂಸಿ ಆಸ್ಪತ್ರೆ ಸಹಯೋಗದಲ್ಲಿ ರಕ್ತದಾನ ಶಿಬಿರ ನಡೆಯಿತು

ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ( ರಿ), ಕೆಎಂಸಿ ಆಸ್ಪತ್ರೆ ಹಾಗೂ ಕೊಡಿಯಾಲ್ ಸ್ಫೋರ್ಟ್ ಎಸೋಸಿಯೇಶನ್ ಜಂಟಿ ಸಹಯೋಗದಲ್ಲಿ ಭಾನುವಾರ ರಕ್ತದಾನ ಶಿಬಿರ ನಡೆಯಿತು.

ಮಂಗಳೂರಿನ ವಿಟಿ ರಸ್ತೆಯಲ್ಲಿರುವ ಶ್ರೀ ವಿಠೋಭ ರುಕುಮಾಯಿ ದೇವಸ್ಥಾನದ ಆವರಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ರಕ್ತದಾನ ಶಿಬಿರ ನಡೆಯಿತು.ಈ ಸಂದರ್ಭದಲ್ಲಿ ಮಾತನಾಡಿದ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರೂ ಆಗಿರುವ ಶಾಸಕ ಡಿ ವೇದವ್ಯಾಸ ಕಾಮತ್ ಮಾತನಾಡಿ ಸೇವಾಂಜಲಿ ಚಾರಿಟೇಬಲ್ ಟ್ರಸ್ಟ್ ಕಳೆದ 20 ವರ್ಷಗಳಿಂದ ವರ್ಷಕ್ಕೆ ಎರಡು ಸಲ ರಕ್ತದಾನ ಶಿಬಿರ ನಡೆಸುತ್ತದೆ. ಅದಲ್ಲದೇ ಉಳಿದ ಸಮಯದಲ್ಲಿ ಅವಶ್ಯಕತೆ ಬಿದ್ದರೆ ನಮ್ಮ ಸಂಘಟನೆಯ ಯುವಕರು ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡುವ ಮೂಲಕ ಮಾನವೀಯ ಕಾರ್ಯದಲ್ಲಿ ತೊಡಗಿಕೊಳ್ಳುತ್ತಾರೆ. ನಮ್ಮ ಜೊತೆ ಈ ಶ್ರೇಷ್ಟ ಕಾರ್ಯದಲ್ಲಿ ನಿಸ್ವಾರ್ಥತೆಯಿಂದ ಕೈ ಜೋಡಿಸುವ ಕೆಎಂಸಿ ಆಸ್ಪತ್ರೆಯ ಎಲ್ಲಾ ವೈದ್ಯರಿಗೂ, ಸಿಬ್ಬಂದಿಗಳಿಗೂ ತಾವು ಕೃತಜ್ಞತೆ ಅರ್ಪಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಹನುಮಂತ ಕಾಮತ್, ಮಂಗಲ್ಪಾಡಿ ನರೇಶ್ ಶೆಣೈ, ನರೇಶ್ ಪ್ರಭು, ಚೇತನ್ ಕಾಮತ್, ಸಂತೋಷ್ ಭಂಡಾರಿ, ರಘುವೀರ್ ಭಾಗವತ್ ಸಹಿತ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಪುಟಾಣಿ ಮಕ್ಕಳಿಗಾಗಿ ಕಥೆ ಹೇಳುವ ಸ್ಪರ್ಧೆಯನ್ನು ಯೂತ್ ಆಫ್ ಜಿಎಸ್ ಬಿ ವತಿಯಿಂದ ಆಯೋಜಿಸಲಾಗಿತ್ತು.

Latest News